- Advertisement -
- Advertisement -
ವಿಟ್ಲ : ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ವಾಹನವೊಂದು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯ ಬಿದ್ದ ಘಟನೆ ಬುಧವಾರ ಮುಂಜಾನೆ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ನಡೆದಿದೆ.
ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದು, ಬೆಳಗ್ಗಿನ ಜಾವ ನಿದ್ದೆಯ ಮಂಪರಿನಲ್ಲಿ ಅಪಘಾತ ಸಂಭವಿಸಿರಬಹುದು ಎನ್ನಲಾಗಿದೆ.
- Advertisement -