- Advertisement -
- Advertisement -





ಮಾಣಿ : ಸಮೀಪದ ಸೂರಿಕುಮೇರು ಜಂಕ್ಷನ್ ನಲ್ಲಿ ಮಂಗಳವಾರ ಬೆಳಿಗ್ಗೆ ಖಾಸಗಿ ಬಸ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ,ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಸಂಪೂರ್ಣವಾಗಿ ಮುಗಿಯುತ್ತಾ ಬಂದಿದ್ದು ,ವಾಹನಗಳು ನಿಯಂತ್ರಣಕ್ಕೆ ಸಿಗದ ವೇಗದಲ್ಲಿ ಅಪಾಯಕಾರಿಯಾಗಿ ಹೋಗುವುದರಿಂದ ಹೆಚ್ಚೆಚ್ಚು ಅಪಘಾತಗಳು ಸಂಭವಿಸುತ್ತಾ ಇದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
- Advertisement -








