Sunday, May 5, 2024
spot_imgspot_img
spot_imgspot_img

ಮಕ್ಕಳೆದುರೇ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದ ಪತಿ..!!

- Advertisement -G L Acharya panikkar
- Advertisement -

ಮೂರು ದಿನಗಳ ಹಿಂದಷ್ಟೇ ಜೈಲಿನಿಂದ ಬಂದಿದ್ದ ಪತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಮಕ್ಕಳೆದುರೇ ಪತ್ನಿಯ ಗುಪ್ತಾಂಗಕ್ಕೆ ಚಾಕು ಇರಿದ‌ ಘಟನೆ ಆಡುಗೋಡಿ ಬಳಿಯ ಬಜಾರ್ ಸ್ಟ್ರೀಟ್‍ನಲ್ಲಿ ನಡೆದಿದೆ.

ನೀಲಸಂದ್ರ ನಿವಾಸಿ ದಯಾನಂದ ಕೃತ್ಯ ಎಸಗಿರುವ ಆರೋಪಿಯಾಗಿದ್ದಾನೆ. ಆರೋಪಿ ಕೆಲವು ವರ್ಷಗಳ ಹಿಂದೆ ಮಹಿಳೆಯನ್ನು ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರತಿ ದಿನ ಮನೆಗೆ ಬರುವ ಮುನ್ನ ಕುಡಿದು ಬಂದು ಆರೋಪಿ ಗಲಾಟೆ ಮಾಡುತ್ತಿದ್ದ. ಕ್ರೈಂ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ ಆರೋಪಿ 3 ದಿನದ ಹಿಂದೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಕೊಲೆ ಪ್ರಕರಣವೊಂದರಿಂದ ಹೊರ ಬಂದಿದ್ದ.

ಭಾನುವಾರ ರಾತ್ರಿ ಕುಡಿದು ಬಂದು ಪತ್ನಿ ಪ್ರಿಯಾಂಕಾ ಫೋನ್‍ನಲ್ಲಿ ಯಾರೊಂದಿಗೋ ಮಾತನಾಡುತ್ತಾಳೆ ಎಂದು ಗಲಾಟೆ ಶುರು ಮಾಡಿದ್ದಾನೆ. ಅಲ್ಲದೇ ಆಕೆ ಕೆಲಸ ಮಾಡುವ ಸ್ಥಳದಲ್ಲಿ ಬೇರೋಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಆಕೆಯ ತೊಡೆ ಹಾಗೂ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಪ್ರಿಯಾಂಕಾ ಜೋರಾಗಿ ಕಿರುಚಿದ್ದು ಸ್ಥಳೀಯರು ಸೇರಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದಾನೆ.

ಕೂಡಲೇ ಸೇರಿದ್ದ ಜನ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಡುಗೋಡಿ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

- Advertisement -

Related news

error: Content is protected !!