Saturday, June 28, 2025
spot_imgspot_img
spot_imgspot_img

ಶೀಲ ಶಂಕಿಸಿ ಪತ್ನಿಯನ್ನು ಇರಿದು ಕೊಂದ ಪತಿ; ಮಗನೊಂದಿಗೆ ಪರಾರಿ

- Advertisement -
- Advertisement -

ಪತಿಯೇ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ, ಬಳಿಕ ಮಗುವನ್ನು ಕರೆದುಕೊಂಡು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ನಡೆದಿದೆ.

ಮಧುಶ್ರಿ (25) ಕೊಲೆಯಾಗಿರುವ ಮಹಿಳೆ. ಕಳೆದ ಒಂದುವರೆ ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಧುಶ್ರೀ ಕುಟುಂಬ. ಮಂಡ್ಯ ತಾಲೂಕಿನ ಕರಡಹಳ್ಳಿ ಗ್ರಾಮದ ಮಂಜುನಾಥ್ ಜೊತೆ ಕಳೆದ ನಾಲ್ಕೈದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇವರಿಗೆ 4 ವರ್ಷದ ಗಂಡು ಮಗುವಿದ್ದು, ಮಂಜುನಾಥ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ನಾಗಮಂಗಲ ಪಟ್ಟಣದ ಟಿ.ಬಿ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದರು, ಪತಿ ವಾರಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದ. ಇತ್ತೀಚಿಗೆ ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿದ್ದರಿಂದ ಆಗಾಗ್ಗೆ ಜಗಳ ನಡೆಯುತ್ತಿತ್ತು.

ಸ್ವಾತಂತ್ರ್ಯೋತ್ಸವ ದಿನವಾದ ಮಂಗಳವಾರ ಮಧ್ಯಾಹ್ನ ಬೆಂಗಳೂರಿನಿಂದ ಮಂಜುನಾಥ್ ಮನೆಗೆ ಬಂದಿದ್ದು ಈ ವೇಳೆ ದಂಪತಿಗಳ ನಡುವೆ ಜಗಳ ನಡೆದಿದೆ. ಪತ್ನಿಯ ಹೊಟ್ಟೆ ಭಾಗಕ್ಕೆ ಬಲವಾದ ಆಯುಧದಿಂದ ಇರಿದು ಹತ್ಯೆ ಮಾಡಿ, ಮಗ ಮನ್ವಿತ್ ನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇಂದು ಬೆಳ್ಳಗ್ಗೆ ಮಧು ಎಂಬಾತ ಮನೆ ಬಳಿ ಹೋದಾಗ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ.ಈ ಕುರಿತು ನಾಗಮಂಗಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!