Friday, June 27, 2025
spot_imgspot_img
spot_imgspot_img

ಕಾಲೇಜಿನಿಂದ ಸಸ್ಪೆಂಡ್ ; ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಸಸ್ಪೆಂಡ್ ಮಾಡಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗರಬಾವಿಯ ವಿನಾಯಕ ಲೇಔಟ್‌ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ನಿಖಿಲ್ ಸುರೇಶ್ ಎಂದು ಗುರುತಿಸಲಾಗಿದೆ.

ಮೃತ ನಿಖಿಲ್ ಸುರೇಶ್ ಬನ್ನೇರುಘಟ್ಟದ ಎಎಮ್‌ಸಿ ಕಾಲೇಜಿನಲ್ಲಿ ಹೋಟೇಲ್ ಮ್ಯಾನೇಜ್ ಮೆಂಟ್ ಕೋರ್ಸ್ ಮಾಡುತ್ತಿದ್ದನು. ಕಳೆದ 15 ದಿನಗಳ ಹಿಂದೆ ನಿಖಿಲ್ ವಿದ್ಯಾರ್ಥಿನಿಯೊಬ್ಬಳ ಜೊತೆ ಜಗಳ ಮಾಡಿಕೊಂಡಿದ್ದನಂತೆ. ತನ್ನ ತಪ್ಪಿಲ್ಲದಿದ್ದರೂ ಕಾಲೇಜು ಆಡಳಿತ ಮಂಡಳಿ ನಿಖಿಲ್‌ನನ್ನ ಸಸ್ಪೆಂಡ್ ಮಾಡಿದ್ದರು. ಇದರಿಂದ ನಿಖಿಲ್ ತಾಯಿಯೊಂದಿಗೆ ಮತ್ತೆ ಕಾಲೇಜಿಗೆ ಹೋಗಿ ಕ್ಷಮೆ ಕೇಳಿದ್ದನು. ಅಪಾಲಜಿ ಲೆಟರ್‌ ಬರೆದುಕೊಟ್ಟಿದ್ರು ಮತ್ತೆ ಕಾಲೇಜಿಗೆ ಬರಲು ಅವಕಾಶ ಕೊಟ್ಟಿರಲಿಲ್ಲವಂತೆ. ಅಷ್ಟೇ ಅಲ್ಲದೆ ಕಾಲೇಜು ಸಿಬ್ಬಂದಿ ಹಲ್ಲೆ ಮಾಡಿ ಬೈದು ಕಾಲೇಜಿನಿಂದ ಹೊರಹಾಕಿದ್ದಾಗಿ ಪೋಷಕರು ಆರೋಪಿಸಿದ್ದಾರೆ.

ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ದೂರು ನೀಡಿದರೂ ಪೊಲೀಸರು ನಿರ್ಲಕ್ಷ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. 15 ದಿನ ಬಿಟ್ಟು ಮತ್ತೆ ಬರೋದಾಗಿ ಪೊಲೀಸರು ಹೇಳಿದ್ದರು. ಆದ್ರೆ, ನಿಖಿಲ್ ಸುರೇಶ್ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬನ್ನೇರುಘಟ್ಟದ ಎಎಮ್‌ಸಿ ಕಾಲೇಜಿನಲ್ಲಿ ಮೊದಲ ವರ್ಷದ ಹೋಟೇಲ್ ಮ್ಯಾನೇಜ್ ಮೆಂಟ್ ಕೋರ್ಸ್‌ಗೆ ಒಂದೂವರೆ ಲಕ್ಷ ಫೀಸ್ ಕೊಟ್ಟು ವ್ಯಾಸಂಗ ಮಾಡುತ್ತಿದ್ದ.

- Advertisement -

Related news

error: Content is protected !!