Thursday, May 16, 2024
spot_imgspot_img
spot_imgspot_img

ಸುಳ್ಯ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಮೂವರು ಗಂಭೀರ

- Advertisement -G L Acharya panikkar
- Advertisement -

ಸುಳ್ಯ: ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಸ್ವಿಫ್ಟ್ ಕಾರಿಗೆ ಕಂಟೈನರ್‌ ಲಾರಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ನಿವಾಸಿ ರವಿ ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಲಾರಿ ಚಾಲಕ ಮಂಗಳೂರಿನ ಕುಳಾಯಿ ನಿವಾಸಿ ಈಶ್ವರ (42), ಕಾರಿನಲ್ಲಿದ್ದ ಪ್ರಯಾಣಿಕರಾದ ಚಂದ್ರಶೇಖರ, ನಿತಿನ್, ಜಗದೀಶ್ ಹಾಗೂ ಹರ್ಷ ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಪೈಕಿ ಈಶ್ವರ, ಚಂದ್ರಶೇಖರ ಮತ್ತು ನಿತಿನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿಯ ಬ್ರೇಕ್ ವೈಫಲ್ಯಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರಿನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಇದರಿಂದ ಕಾರಿನಲ್ಲಿದ್ದ ರವಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಾರಿನಲ್ಲಿದ್ದವರು ಬೆಂಗಳೂರಿನಿಂದ ಮೈಸೂರು ಮೂಲಕ ಧರ್ಮಸ್ಥಳಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್‌ ಲಾರಿ ಬ್ರೇಕ್‌ ವೈಫ‌ಲ್ಯಗೊಂಡು ಮುಂದೆ ಹೋಗುತ್ತಿದ್ದ ಕಾರಿಗೆ ಢಿಕ್ಕಿಯಾಗಿ ಪಲ್ಟಿಯಾಗಿತ್ತು. ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟು ಉಳಿದ ನಾಲ್ವರು ಗಾಯಗೊಂಡಿದ್ದಾರೆ. ಇವರು ಬೆಂಗಳೂರಿನಿಂದ ಮೈಸೂರು ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!