Sunday, June 29, 2025
spot_imgspot_img
spot_imgspot_img

ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ: ಕುಣಿದು ಕುಪ್ಪಳಿಸಿದ ಫ್ಯಾನ್ಸ್,

- Advertisement -
- Advertisement -

ಟಿ20 ವಿಶ್ವಕಪ್ ಫೈನಲ್​​​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ರೋಚಕ ಗೆಲುವು ದಾಖಲಿಸಿತ್ತು. ಆ ಮೂಲಕ ಬರೋಬ್ಬರಿ 17 ವರ್ಷಗಳ ಬಳಿಕ ಭಾರತ ತಂಡ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ತಾಯ್ನಾಡಿಗೆ ಬಂದಿರುವ ಭಾರತ ತಂಡಕ್ಕೆ ಅತ್ಯದ್ಭುತ ಸ್ವಾಗತ ದೊರೆತಿದೆ. ಮುಂಬೈನಲ್ಲಿ ಭಾರತ ತಂಡದ ವಿಜಯಯಾತ್ರೆ ಮಾಡಲಾಗಿದ್ದು, ಲಕ್ಷಾಂತರ ಜನರು ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗಣ್ಯರು ಸೇರಿದಂತೆ ಹಲವರು ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವಕಪ್ ಗೆದ್ದ ದಿನವೇ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಘೋಷಿಸಿತ್ತು. ಈ ಬಹುಮಾನದ ಮೊತ್ತವನ್ನು ಆಟಗಾರರಿಗೆ ಬಿಸಿಸಿಐ ನಿನ್ನೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ವಿತರಣೆ ಮಾಡಿದೆ .ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮದ ಬಳಿಕ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜಮಾಯಿಸಿದ್ದ ಲಕ್ಷಾಂತರ ಅಭಿಮಾನಿಗಳತ್ತ ಭಾರತ ತಂಡದ ಆಟಗಾರರು ಟಿ20 ವಿಶ್ವಕಪ್ ಟ್ರೋಫಿಯನ್ನು ಪ್ರದರ್ಶಿಸಿದರು.

ದೆಹಲಿಯಿಂದ ಮುಂಬೈಗೆ ಆಗಮಿಸಿದ್ದ ಭಾರತ ತಂಡ ನಿನ್ನೆ ಸಂಜೆ ತೆರೆದ ಬಸ್​ನಲ್ಲಿ ವಿಜಯಯಾತ್ರೆಯನ್ನು ನಡೆಸಿತು. ನಾರಿಮನ್ ಪಾಯಿಂಟ್​ನಿಂದ ಶುರುವಾಗುವ ವಿಜಯೋತ್ಸವ ಮೆರವಣಿಗೆ ಪ್ರಸಿದ್ಧ ಮರೈನ್ ಡ್ರೈವ್ ಬೀಚ್ ಮೂಲಕ ವಾಂಖೇಡೆ ಸ್ಟೇಡಿಯಂಗೆ ತಲುಪಿತು. ಈ ವೇಳೆ ಸಮುದ್ರದ ಕಿನಾರೆ ಮರೈನ್ ಡ್ರೈವ್ ಬೀಚ್​ನ ರಸ್ತೆಯ ಎರಡೂ ಬದಿಯಲ್ಲಿ ಲಕ್ಷಾಂತರ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತ್ತಿದ್ದರು.

ಭಾರತ ತಂಡದ ವಿಜಯೋತ್ಸವ ಯಾತ್ರೆ ವೇಳೆ ರೋಹಿತ್​ ಶರ್ಮಾ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ಟಿಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ತಮ್ಮ ಅಭಿಮಾನಿಗಳಿಗೆ ಎತ್ತಿ ತೋರಿಸುವ ಮೂಲಕ ಫೋಟೋಗೂ ಫೋಸ್ ನೀಡಿದ್ದಾರೆ.​ ಟೀಂ ಇಂಡಿಯಾ ವಿಜಯೋತ್ಸವದ ವೇಳೆ ಟಿ20 ವಿಶ್ವಕಪ್ ಟ್ರೋಫಿಯನ್ನು ನೆರೆದಿದ್ದ ಲಕ್ಷಾಂತರ ಅಭಿಮಾನಿಗಳಿಗೆ ತೋರಿಸುವ ಮೂಲಕ ಸಂಭ್ರಮಿಸಿದ್ದಾರೆ.

ಮುಂಬೈನಲ್ಲಿ ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕೆಲ ಕಾಲ ಮಳೆ ಅಡ್ಡಿಯಾಗಿದ್ದು, ಮುಂಬೈನ ವಾಖೆಂಡೆ ಮೈದಾನದಲ್ಲಿ ಜೋರು ಮಳೆ ಆಗಿತ್ತು. ಧಾರಾಕಾರ ಮಳೆ ಬಂದರೂ ಕೂಡ ಅಭಿಮಾನಿಗಳು ಭಾರತ ತಂಡವನ್ನು ಸ್ವಾಗತಿಸಲು ಕಾದು ಕುಳಿತ್ತಿದ್ದರು.

- Advertisement -

Related news

error: Content is protected !!