- Advertisement -
- Advertisement -
ಮಂಜೇಶ್ವರ: ಕಾರಿನಲ್ಲಿ ಅಕ್ರಮ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, 27.46 ಲಕ್ಷ
ರೂಪಾಯಿ ವಶಪಡಿಸಿಕೊಂಡ ಘಟನೆ ನಡೆದಿದೆ. ಬಂಧಿತನನ್ನು ಕುಂಬಾಜೆಯ ಶಿಹಾಬುದ್ದೀನ್ (28) ಎಂದು ತಿಳಿದುಬಂದಿದೆ.
ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ತಲಪಾಡಿಯಲ್ಲಿ ನಿನ್ನೆ ರಾತ್ರಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಇದೇ ದಾರಿಯಾಗಿ ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಹಣ ಸಾಗಾಟ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement -