Saturday, June 28, 2025
spot_imgspot_img
spot_imgspot_img

ತಮಿಳುನಾಡು ಬಿಎಸ್​ಪಿ ರಾಜ್ಯಾಧ್ಯಕ್ಷ ಆರ್ಮ್​ಸ್ಟ್ರಾಂಗ್​ ಬರ್ಬರ ಹತ್ಯೆ!

- Advertisement -
- Advertisement -

ತಮಿಳುನಾಡು ಬಹುಜನ ಸಮಾಜ ಪಕ್ಷದ (BSP) ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನ ಆರು ಮಂದಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿನ್ನೆ ಸಂಜೆ ವೇಳೆಗೆ ಚೆನ್ನೈನ ಪೆರಂಬೂರಿನ ಸದಾಯಪ್ಪನ್ ಸ್ಟ್ರೀಟ್‌ನಲ್ಲಿರುವ ಅವರ ಮನೆಯ ಸಮೀಪವೇ ದ್ವಿಚಕ್ರ ವಾಹನದಲ್ಲಿ ಬಂದ ಸವಾರರು ಅವರನ್ನು ಬರ್ಬರವಾಗಿ ಕಡಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್ ಅವರನ್ನು ಥೌಸಂಡ್ ಲೈಟ್ಸ್ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರ ಸ್ಥಿತಿ ಹದಗೆಟ್ಟಿದ್ದು, ಮಾರ್ಗಮಧ್ಯೆ ಅವರು ಸಾವನ್ನಪ್ಪಿದ್ದಾರೆ.

ಇನ್ನು, ಚೆನ್ನೈ ಪೊಲೀಸರು ಹಂತಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದ್ದಾರೆ. ಈ ಕೊಲೆಗೆ ಇಡೀ ಚೆನ್ನೈನ ಪೆರಂಬೂರ್ ಪ್ರದೇಶ ಜನ ಬೆಚ್ಚಿಬಿದ್ದಿದ್ದಾರೆ. ಅಪರಿಚಿತರ ಗ್ಯಾಂಗ್ ಚಾಕುವಿನಿಂದ ಇರಿದು ಕೊಲೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ ಆರ್ಮ್‌ಸ್ಟ್ರಾಂಗ್ ಮತ್ತು ಆತನ ಜೊತೆಗಿದ್ದ ಇಬ್ಬರು ಸಹಚರರ ಮೇಲೂ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿದ್ದಾರೆಂದು ಎಂದು ತಿಳಿದುಬಂದಿದೆ. ಘಟನೆಯ ಕುರಿತು ಸೇಂಬಿಯಂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವಿಷಯ ತಿಳಿದು ಪಕ್ಷದ ಕಾರ್ಯಕರ್ತರು ಮೃತದೇಹ ಇರುವ ರಾಜೀವ್ ಗಾಂಧಿ ಆಸ್ಪತ್ರೆ ಬಳಿಗೆ ದಾವಿಸುತ್ತಿದ್ದಾರೆ.

- Advertisement -

Related news

error: Content is protected !!