Monday, May 13, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿ; ಇಬ್ಬರು ಸಾವು; 7 ಜನರಿಗೆ ಗಂಭೀರ ಗಾಯ..!

- Advertisement -G L Acharya panikkar
- Advertisement -

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿ ಹೊಡೆದು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು 7 ಜನ ಗಂಭೀರ ಗಾಯಗೊಂಡ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕುಪ್ಪೂರು-ಕುರುಬರಹಳ್ಳಿ ಬಳಿ‌ ನಡೆದಿದೆ.

ಮೃತಪಟ್ಟವರನ್ನು ನಯನ(12) ಪೇಮಮ್ಮ‌ (50) ಎಂದು ಗುರುತಿಸಲಾಗಿದೆ.

ಮೃತರು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದವರಾಗಿದ್ದಾರೆ. ಸುಮಾರು 20 ಜನ ಟಾಟಾ ಏಸ್​ನಲ್ಲಿ ಜಾತ್ರೆಗೆ ತೆರಳುತ್ತಿದ್ದರು. ತಿಪಟೂರಿನ ಹೊನ್ನವಳ್ಳಿಯ ಶ್ರೀ ಕಾಲಭೈರೇಶ್ವರ ಜಾತ್ರೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!