- Advertisement -
- Advertisement -
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿ ಹೊಡೆದು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು 7 ಜನ ಗಂಭೀರ ಗಾಯಗೊಂಡ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕುಪ್ಪೂರು-ಕುರುಬರಹಳ್ಳಿ ಬಳಿ ನಡೆದಿದೆ.
ಮೃತಪಟ್ಟವರನ್ನು ನಯನ(12) ಪೇಮಮ್ಮ (50) ಎಂದು ಗುರುತಿಸಲಾಗಿದೆ.
ಮೃತರು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದವರಾಗಿದ್ದಾರೆ. ಸುಮಾರು 20 ಜನ ಟಾಟಾ ಏಸ್ನಲ್ಲಿ ಜಾತ್ರೆಗೆ ತೆರಳುತ್ತಿದ್ದರು. ತಿಪಟೂರಿನ ಹೊನ್ನವಳ್ಳಿಯ ಶ್ರೀ ಕಾಲಭೈರೇಶ್ವರ ಜಾತ್ರೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -