- Advertisement -
- Advertisement -




ನೆಲಮಂಗಲ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಟೆಕ್ಕಿಯೊಬ್ಬರು ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ.
ಮೃತ ಟೆಕ್ಕಿಯನ್ನು ಪ್ರಿಯಾಂಕ (26) ಎಂದು ಗುರುತಿಸಲಾಗಿದೆ.
ಯುವತಿ ಅಣ್ಣನ ಜೊತೆ ಬೈಕ್ನಲ್ಲಿ ಎಪಿಎಂಸಿ ಹುಸ್ಕೂರು ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ. ರಸ್ತೆ ಕಾಮಗಾರಿಯಿಂದ ಈ ರಸ್ತೆ ಹದಗೆಟ್ಟಿದ್ದು, ಗುಂಡಿ ತಪ್ಪಿಸಲು ಪ್ರಿಯಾಂಕ ಸಹೋದರ ಯತ್ನಿಸಿದ್ದಾರೆ. ಈ ವೇಳೆ ಮುಂದೆ ಬಂದ ಲಾರಿ ಕೆಳಗೆ ಯುವತಿ ಬಿದ್ದಿದ್ದಾರೆ. ಈ ವೇಳೆ ಲಾರಿ ಯುವತಿಯ ತಲೆ ಮೇಲೆ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








