- Advertisement -
- Advertisement -




ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಬಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಶನಿವಾರ ಬೆಳಗ್ಗಿನ ಜಾವ ಸುಮಾರು 1:40 ರಿಂದ 2:00 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಬಾಗ ಮುರಿದು ಬಿದ್ದಿದೆ. ರಥ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರು. ಆದರೆ ಅದೃಷ್ಟವಶಾತ್ ತೆರಿನಲ್ಲಿದ್ದ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.ಈ ಘಟನೆಯು ನೆರೆದಿದ್ದ ಭಕ್ತರ ಆತಂಕಕ್ಕೆ ಕಾರಣವಾಯಿತು. ನಂತರ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ನೆರವೇರಿಸಲಾಯಿತು.
- Advertisement -