- Advertisement -
- Advertisement -




ಉಳ್ಳಾಲ: ಟೆಂಪೋ ಚಾಲಕ ನಿಯಂತ್ರಣ ಕಳೆದು ಟೆಂಪೋ ವ್ಯಕ್ತಿಯೋರ್ವರ ಮೇಲೆ ಹರಿದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕಲ್ಲಾಪು ಆಡಂಕುದ್ರು ನಲ್ಲಿ ಗುರುವಾರ ಅಪರಾಹ್ನ ಸಂಭವಿಸಿದೆ.
ಬಂಟ್ವಾಳ ಮೂಲದ ಆದಂ (64) ಮೃತಪಟ್ಟವರು.
ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಢಿಕ್ಕಿ ಹೊಡೆದು ಬಳಿಕ ಅಂಗಡಿಯೊಂದರ ನಾಮಫಲಕಗಳಿಗೆ ಗುದ್ದಿ ಕಂದಕಕ್ಕೆ ಉರುಳಿದೆ. ಮಂಗಳೂರಿನಿಂದ ಹೊರಟಿದ್ದ ಸರ್ಕಾರಿ ಬಸ್ ಆಡಂಕುದ್ರು ಬಳಿ ಕೆಟ್ಟು ನಿಂತಿದ್ದು, ಅವರು ಆ ಬಸ್ ನಿಂದ ಇಳಿದು ರಸ್ತೆ ದಾಟುವಾಗ ಈ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿ ಮಕ್ಕಳು ಕುಳಿತಿದ್ದು, ಕಾರು ಚಾಲಕ ಅಂಗಡಿಗೆ ತೆರಳಿದ್ದರು. ಮಕ್ಕಳು ಅಪಾಯವಿಲ್ಲದೇ ಪಾರಾಗಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -