Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ : ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ : 19 ಮಂದಿಗೆ ಗಾಯ

- Advertisement -
- Advertisement -
This image has an empty alt attribute; its file name is saptha-new-10-819x1024.jpg
This image has an empty alt attribute; its file name is VC_PUC_-1-819x1024.jpg

ಬೆಳ್ತಂಗಡಿ : ಬಸ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ 19 ಮಂದಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ಗುಡಿ ಬಳಿ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆಯತ್ತ ಚಲಿಸುತ್ತಿದ್ದ ಕಾರ್ಕಳ ಮಾರ್ಗದ ವಿಶಾಲ್ ಬಸ್‌ಗೆ ಎದುರುಗಡೆಯಿಂದ ಬರುತ್ತಿದ್ದ ಎಚ್.ಪಿ. ಕಂಪನಿಯ ಪೆಟ್ರೋಲಿಯಂ ಉತ್ಪನ್ನ ಸಾಗಿಸುವ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ವಾಹನಗಳ ಚಾಲಕರಿಗೆ ಗಾಯವಾಗಿದ್ದು, ಬಸ್‌ನಲ್ಲಿದ್ದ ಚಾಲಕ, ನಿರ್ವಾಹಕ, ತಾಯಿ-ಮಗು ಸಹಿತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಟ್ಯಾಂಕರ್‌ ಬಸ್ಸನ್ನು ತುಂಬಾ ದೂರ ತಳ್ಳಿಕೊಂಡು ಹೋಗಿದ್ದು, ಬಸ್ ರಸ್ತೆಗೆ ಅಡ್ಡಲಾಗಿ ನಿಂತಿದೆ. ಎರಡೂ ವಾಹನಗಳ ಮುಂಭಾಗದ ಗಾಜು ಒಡೆದಿದ್ದು, ಜಖಂಗೊಂಡಿದೆ.

- Advertisement -

Related news

error: Content is protected !!