Monday, June 30, 2025
spot_imgspot_img
spot_imgspot_img

ಮಂಗಳೂರು : ಕಾರು – ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ : ಶಿಕ್ಷಕಿ ಮೃತ್ಯು

- Advertisement -
- Advertisement -

ಮಂಗಳೂರು: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬಂದರ್ ಧಕ್ಕೆಯಲ್ಲಿ ನಡೆದಿದೆ.

ಮೃತರನ್ನು ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಎಂದು ಗುರುತಿಸಲಾಗಿದೆ

ಇವರ ಪತಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಶಾಹಿದಾ ಅವರು ದ್ವಿಚಕ್ರ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ, ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!