ನಸುಕಿನ ವೇಳೆ ಟ್ಯಾಕ್ಸಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ,ಬೈಕಿಗೆ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ, ಬೈಕಿನಲ್ಲಿದ್ದ ಓರ್ವ ಸುಟ್ಟು ಕರಕಲಾಗಿ,ಮೃತಪಟ್ಟ ದಾರುಣ ಘಟನೆ ಅಂಕೋಲಾ ರಾ. ಹೆ 66 ರ ತಾಲೂಕಿನ ಹಟ್ಟಿಕೇರಿ ವ್ಯಾಪ್ತಿಯಲ್ಲಿ ಸಂಭವಿಸಿದೆ.
ತಾಲೂಕಿನ ಹಾರವಾಡ ಗ್ರಾಪಂ. ವ್ಯಾಪ್ತಿಯ ತರಂಗಮೇಟ್ದ ಸುಮಂತ ಯಾದೋಬಾ ಹರಿಕಂತ್ರ (23) ಎಂಬಾತನೇ ಸ್ಥಳದಲ್ಲಿ ಸುಟ್ಟು ಕರಕಲಾಗಿ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಸಹ ಸವಾರರಾದ ಹಾರವಾಡ ಸೀಬರ್ಡ್ ಕಾಲೋನಿಯ ಸುಮೀತ ರಾಮಚಂದ್ರ ಹರಿಕಂತ್ರ (22), ತರಂಗಮೇಟ್ದ ಚಾಣಕ್ಯ ರಾಮಚಂದ್ರ ಹರಿಕಂತ್ರ (23) ಗಂಬೀರ ಗಾಯಗೊಂಡಿದ್ದು, ಇವರನ್ನು ತಾಲೂಕು ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಕ್ರಿಮ್ಸ್ಗೆ ಕೊಂಡೊಯ್ಯಲಾಗಿದೆ.
ಬೈಕ್ ಸವಾರರು ಬೆಳಂಬಾರದಲ್ಲಿ ಮಂಗಳವಾರ ರಾತ್ರಿ ನಡೆದ ಜಾತ್ರಾ ಉತ್ಸವ ಮುಗಿಸಿ ಬೈಕ್ನಲ್ಲಿ ಹಾರವಾಡಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಡಿಕ್ಕಿ ಹೊಡೆದ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿರುತ್ತಾನೆ. ಯಾದೋಬಾ ಲಿಂಗಪ್ಪ ಹರಿಕಂತ್ರ ಪೊಲೀಸ್ ದೂರು ಸಲ್ಲಿಸಿದರು. ಪಿಐ ಶ್ರೀಕಾಂತ ತೋಟಗಿ, ಪಿಎಸ್ಐ ಉದ್ದಪ್ಪ ಧರೆಪ್ಪನವರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಪಿಎಸ್ಐ ಸುನೀಲ ಹುಲ್ಲೊಳ್ಳಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.