Sunday, April 28, 2024
spot_imgspot_img
spot_imgspot_img

ಕಾಸರಗೋಡು: ಭೀಕರ ರಸ್ತೆ ಅಪಘಾತ – ಬಸ್ ಹರಿದು ವ್ಯಕ್ತಿ ಮೃತ್ಯು

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg

ಕಾಸರಗೋಡು: ಬೈಕ್‌ಗಳು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ವ್ಯಕ್ತಿಯೊಬ್ಬರ‌ ಮೇಲೆ ಬಸ್‌ ಹರಿದು ಮೃತಪಟ್ಟಿರುವ ಘಟನೆ ಬೆಳ್ಳೂರು ಪಲ್ಲಪಾಡಿಯಲ್ಲಿ ಸಂಭವಿಸಿದೆ.

ಮುಳ್ಳೇರಿಯದ ತಿಮ್ಮಪ್ಪ (60) ಮೃತರು. ಗಾಯಗೊಂಡಿರುವ ಕಿನ್ನಿಂಗಾರ ಮೂಲದ ಗಿರೀಶ್ ಅವರನ್ನು ಮುಳ್ಳೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ಳೂರು ಪಲ್ಲಪಾಡಿಯಲ್ಲಿ ಅಪಘಾತ ಸಂಭವಿಸಿದ್ದು, ಬೈಕ್‌ಗಳು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ತಿಮ್ಮಪ್ಪ ರಸ್ತೆಗೆ ಬಿದ್ದಿದ್ದಾರೆ. ಕಾಸರಗೋಡಿನಿಂದ ಕಿನ್ನಿಂಗಾರ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ತಿಮ್ಮಪ್ಪ ಅವರ ದೇಹದ ಮೇಲೆ ಹರಿದಿದೆ.

ಗಂಭೀರವಾಗಿ ಗಾಯಗೊಂಡ ತಿಮ್ಮಪ್ಪ ಅವರನ್ನು ಕಾಸರಗೋಡು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಆದೂರು ಪೊಲೀಸರು ಸ್ಥಳಕ್ಕಾಗಮಿಸಿ, ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!