- Advertisement -
- Advertisement -
ಮಂಗಳೂರು: ಮೂವರು ಮಹಿಳೆಯರ ಮೇಲೆ ಅಪರಿಚಿತನೋರ್ವ ತಲ್ವಾರ್ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿಯಲ್ಲಿ ಸಂಭವಿಸಿದೆ. ಹಾಡಹಗಲೇ ಈ ದುಷ್ಕೃತ್ಯ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಒಳಗೆ ನುಗ್ಗಿದ ದುಷ್ಕರ್ಮಿ ಅಲ್ಲಿದ್ದ ಮೂವರ ಮೇಲೆ ತಲ್ವಾರ್ ದಾಳಿ ನಡೆಸಿದ್ದಾನೆ. ನಿರ್ಮಾಲ, ರಿನಾ ರಾಯ್, ಗುಣವತಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಘಟನೆಯಲ್ಲಿ ನಿರ್ಮಲಾ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ನಿರ್ಮಾಲಾ, ರಿನಾ ರಾಯ್, ಗುಣವತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
- Advertisement -