


ಚೆನ್ನೈ: ಮುಂದಿನ ವರ್ಷ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಘೋಷಿಸಿವೆ. ವಿಧಾನಸಭಾ ಚುನಾವಣೆ ಗೆಲುವಿಗೆ ಪಣತೊಟ್ಟಿರುವ ಭಾರತೀಯ ಜನತಾ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಘೋಷಿಸಿದರು. ಅಲ್ಲದೇ ಎಐಎಡಿಎಂಕೆ ಮುಖ್ಯಸ್ಥ ಪಳನಿಸ್ವಾಮಿ ನೇತೃತ್ವದಲ್ಲಿ ಚುನಾವಣೆ ಎದುರಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
2026 ರಲ್ಲಿ ತಮಿಳುನಾಡಿನಲ್ಲಿ ಎನ್ಡಿ ಸರ್ಕಾರ ರಚನೆಯಾಗಲಿದೆ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದ್ದು, ಅದು ಒಕ್ಕೂಟವಾಗಲಿದೆ. ಈ ಒಕ್ಕೂಟವನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವ ವಹಿಸಲಿದ್ದಾರೆ ಎಂದು ಅವರು ಹೇಳಿದರು. ಉಚ್ಚಾಟಿತ ಎಐಎಡಿಎಂಕೆ ನಾಯಕರಾದ ಓ ಪನ್ನೀರ್ಸೆಲ್ವಂ ಮತ್ತು ಎಎಂಎಂಕೆ ನಾಯಕ ಟಿಟಿವಿ ದಿನಕರನ್ ಅವರನ್ನು ಮೈತ್ರಿಕೂಟದಲ್ಲಿ ಸೇರಿಸಿಕೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆಗೆ, ಬಿಜೆಪಿ ಎಐಎಡಿಎಂಕೆಯ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಶಾ ಸ್ಪಷ್ಟಪಡಿಸಿದರು.








