ಅದ್ದೂರಿ ಮೆರವಣಿಗೆಯೊಂದಿಗೆ ಶ್ರೀ ಶಾರದಾ ದೇವಿಯ ವಿಗ್ರಹ ಪ್ರತಿಷ್ಠೆ





ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ದ.ಕ. ಆಶ್ರಯದಲ್ಲಿ 53ನೇ ವರ್ಷದ ವಿಟ್ಲ ಶಾರದೋತ್ಸವವು ಅ.09ನೇ ಬುಧವಾರದಿಂದ ಅ.13ನೇ ಆದಿತ್ಯವಾರದವರೆಗೆ ವಿಟ್ಲದ ಶ್ರೀ ಅನಂತೇಶ್ವರ ದೇವಸ್ಥಾನದ “ಶ್ರೀ ಅನಂತ ಸದನ”ದಲ್ಲಿ ನಡೆಯಲಿದ್ದು, ಇಂದು ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಶ್ರೀ ಅನಂತೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಲಾಯಿತು.


ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆದ ಬಳಿಕ ಶ್ರೀ ಮಾತೆಯ ವಿಗ್ರಹವನ್ನು ಶ್ರೀ ಚಂದ್ರನಾಥ ಸ್ವಾಮಿ ಜೈನ ಬಸದಿಯಿಂದ ಉತ್ಸವದ ಸ್ಥಳಕ್ಕೆ ಪ್ರತಿಷ್ಠಾ ವಿಧಿ ಕಾರ್ಯಕ್ರಮಕ್ಕೆ ವಿಜೃಂಭಣೆಯ ಮೂಲಕ ತರಲಾಯಿತು.


ಬಳಿಕ ವೇದಮೂರ್ತಿ ಎಂ. ವಿಕಾಸ್ ಭಟ್, ಪುರೋಹಿತರು, ಶ್ರೀರಾಮ ಮಂದಿರ ಹನುಮಗಿರಿ ವಿಟ್ಲ ಇವರು ಶ್ರೀ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪನೆಗೊಳಿಸಿದರು. ನಂತರ ಎಂ. ರಾಧಾಕೃಷ್ಣ ಗೌರವಾಧ್ಯಕ್ಷರು ಶ್ರೀ ದೇವತಾ ಸಮಿತಿ, ವಿಟ್ಲ ಇವರು ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನರ್ಸಪ್ಪ ಪೂಜಾರಿ ನಿಡ್ಯ ಅಧ್ಯಕ್ಷರು ಶ್ರೀ ದೇವತಾ ಸಮಿತಿ ವಿಟ್ಲ ಇವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ಆನುವಂಶಿಕ ಮೊಕ್ತೇಸರರಾದ ಬಂಗಾರು ಅರಸರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಾಲಗೋಕುಲ ಕಾಸರಗೋಡು ಜಿಲ್ಲಾ ರಕ್ಷಾಧಿಕಾರಿ ಶಂಕರ ನಾರಾಯಣ ಭಟ್ ಕಲ್ಲಕಟ್ಟ, ಶ್ರೀ ಚಂದ್ರನಾಥ ಜೈನ ಬಸದಿ ವಿಟ್ಲ ಜಿತೇಶ್, ಹರೀಶ್ ಸಿ. ಹೆಚ್, ಅಧ್ಯಕ್ಷರು ರೋಟರಿ ಕ್ಲಬ್ ವಿಟ್ಲ, ಸಂಗೀತ ಜಗದೀಶ್ ಪಾಣೆಮಜಲು ಉಪಾಧ್ಯಕ್ಷರು, ವಿಟ್ಲ ಪಟ್ಟಣ ಪಂಚಾಯತ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಳಿಕ ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ದೇವತಾ ಸಮಿತಿಯ ಸಹ ಕೋಶಾಧಿಕಾರಿ ಅನಂತ ಪ್ರಸಾದ್ ಸ್ವಾಗತಿಸಿ, ಶ್ರೀನಿವಾಸ್ ನಾಯಕ್ ಧನ್ಯವಾದಗೈದರು.

.
