Sunday, May 5, 2024
spot_imgspot_img
spot_imgspot_img

ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಪೊಲೀಸರಿಗೆ ಶರಣಾದ ಆರೋಪಿ

- Advertisement -G L Acharya panikkar
- Advertisement -

ವೈಯಕ್ತಿಕ ದ್ವೇಷಕ್ಕೆ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ಟಿಪ್ಪು ಬಡಾವಣೆಯಲ್ಲಿ ನಡೆದಿದೆ.

ಜಾಬೀರ್ ಪಾಷ ಅಲಿಯಾಸ್ ನೇಪಾಳ್ (26) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಮುಕ್ತಿಯಾರ್ ಪಾಷಾ ಎಂದು ಗುರುತಿಸಲಾಗಿದೆ. ಕೃತ್ಯದ ಬಳಿಕ ಮುಕ್ತಿಯಾರ್‌ ಅದೇ ಮಧ್ಯರಾತ್ರಿ ಪೊಲೀಸ್‌ ಠಾಣೆಗೆ ಹೋಗಿ ಕೊಲೆ ಮಾಡಿರುವ ವಿಚಾರವನ್ನು ಪೊಲೀಸರ ಬಳಿ ಹೇಳಿ ಶರಣಾಗಿದ್ದಾನೆ. ಈ ಕುರಿತು ಚಿಂತಾಮಣಿ ನಗರ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!