Monday, April 29, 2024
spot_imgspot_img
spot_imgspot_img

ಕಾಪು: ಹಣ ದೋಚಿ ಪರಾರಿಯಾಗಿದ್ದ ಪ್ರಕರಣದ ಆರೋಪಿ ಬಂಧನ

- Advertisement -G L Acharya panikkar
- Advertisement -

ಕಾಪು: ಕಾಪು ಅಂಡರ್ ಪಾಸ್ ಬಳಿ ಲೈನ್ ಸೇಲ್ ಮಾಡಿ ಹಣ ಸಂಗ್ರಹಿಸಿಕೊಂಡು ತೆರಳುತ್ತಿದ್ದ ವ್ಯಕ್ತಿಯನ್ನು ಹಣವನ್ನು ದೋಚಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕಾಪು ಪೊಲಿಪು ನಿವಾಸಿ ಸಂತೋಷ ಕುಮಾರ್‌ (28) ಎಂದು ಗುರುತಿಸಲಾಗಿದೆ.ಆರೋಪಿಯಿಂದ 1,00,200 ರೂ., ಒಂದು ಮೊಬೈಲ್‌ ಫೋನ್‌ ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ಸಂತೆಕಟ್ಟೆ ನಿವಾಸಿ ಉಮೇಶ ಪ್ರಭು ಅವರು ಮಾ. 2ರಂದು ಲೈನ್‌ಸೇಲ್‌ ಮಾಡಿ ಅಂಗಡಿಗಳಿಂದ ಸಂಗ್ರಹಿಸಿದ ಹಣದ ಜತೆಗೆ ಕಾಪು ಅಂಡರ್‌ಪಾಸ್‌ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಮಾರಿಗುಡಿ ಎದುರಿನ ಸರ್ವಿಸ್‌ ರಸ್ತೆಯಲ್ಲಿ ಮಂಗಳೂರು ಕಡೆಯಿಂದ ಬಂದ ಬೈಕ್‌ ಸವಾರ 1.25 ಲಕ್ಷ ರೂ. ದೋಚಿ ಪರಾರಿಯಾಗಿದ್ದ.

ಉಡುಪಿ ಎಸ್ಪಿ ಡಾ| ಅರುಣ್‌ ಕೆ., ಎಎಸ್‌ಪಿ ಅಧೀಕ್ಷಕರಾದ ಎಸ್‌.ಟಿ. ಸಿದ್ದಲಿಂಗಪ್ಪ, ಪರಮೇಶ್ವರ ಹೆಗ್ಡೆ, ಕಾರ್ಕಳ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಅರವಿಂದ ಕಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಎಸ್‌. ಮಾನೆ, ಕ್ರೈಂ ಎಸ್ಸೆ ಪುರುಷೋತ್ತಮ, ಕಾಪು ವೃತ್ತ ಅಪರಾಧ ಪತ್ತೆ ತಂಡದ ಪ್ರವೀಣ ಕುಮಾರ್‌, ನಾರಾಯಣ ಕಾಪು, ರಾಜೇಶ್‌ ಪಡುಬಿದ್ರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -

Related news

error: Content is protected !!