ವಿಟ್ಲ: ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲದ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಶೇಷವಾದ ತಂಡ ರಚಿಸಿ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕನ್ಯಾನದ ಅಬೂಬಕ್ಕರ್( 46) ಎನ್ನಲಾಗಿದೆ.
ಏನಿದು ಪ್ರಕರಣ?
ಹುಡುಗಿ ಒಬ್ಬಂಟಿಯಾಗಿ ಹೋಗುತ್ತಿದ್ದಾಗ ಅನುಮಾನಾಸ್ಪದ ಅನ್ಯಕೋಮಿನ ಯುವಕನೋರ್ವ ಬಂದು ಕಡಂಬುಗೆ ಹೋಗುವ ದಾರಿ ಯಾವುದು ಎಂದು ಕೇಳಿದ್ದಾನೆ. ನಂತರ ಲೈಂಗಿಕ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ತನಿಖೆ ಚುರುಕುಗೊಳಿಸಿ ಸ್ಥಳೀಯ ಸಿಸಿ ಕ್ಯಾಮಾರಗಳನ್ನು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಪತ್ತೆಯ ಕಾರ್ಯದಲ್ಲಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ನಾಗರಾಜ್ ಹೆಚ್ ಅವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ಹೆಚ್ಸಿ ರಕ್ಷಿತ್ ಮತ್ತು ಪಿಸಿ ಹೇಮರಾಜರವರು ಭಾಗವಹಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿದ ಪೊಲೀಸರಿಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.