Saturday, June 28, 2025
spot_imgspot_img
spot_imgspot_img

ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆಗೈದು ಫ್ರಿಡ್ಜ್​ನಲ್ಲಿಟ್ಟ ಆರೋಪಿ ಆತ್ಮಹತ್ಯೆ

- Advertisement -
- Advertisement -

ದೆಹಲಿಯ ಶ್ರದ್ಧಾವಾಕರ್‌ ಮಾದರಿಯಲ್ಲಿ ಹತ್ಯೆಗೀಡಾಗಿದ್ದ ಮಹಾಲಕ್ಷ್ಮಿ ಕೊಲೆ ಪ್ರಕರಣದ ತನಿಖೆ ಚುರುಕು ಪಡೆದಿದೆ. ಈ ನಡುವೆಯೇ ಪ್ರಕರಣ ಶಂಕಿತ ಆರೋಪಿ ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮುಕ್ತಿರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಕೊಲೆ ಆರೋಪಿ. ಈತ ಮಹಾಲಕ್ಷ್ಮಿ ಕೊಲೆ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ಸಂಬಂಧ ವಿಚಾರಣೆಗೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಒಡಿಶಾಗೆ ತೆರಳಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸೆಪ್ಟೆಂಬರ್ 1ರ ತನಕ ಮಹಾಲಕ್ಷ್ಮಿ ಕೆಲಸಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಅಥವಾ 3 ರಂದು ಕೊಲೆ ಆಗಿರಬಹುದು ಎಂದು ಪೊಲೀಸರು ಸದ್ಯಕ್ಕೆ ಅಂದಾಜಿಸಿದ್ದಾರೆ. ಇನ್ನೂ ಆಕೆ ಕೆಲಸ ಮಾಡ್ತಿದ್ದ ಶಾಪ್‌ನ ಟೀಂ ಲೀಡರ್ ಮುಕ್ತಿರಂಜನ್ ಕೂಡ ಸೆಪ್ಟೆಂಬರ್ 1ರ ನಂತರ ಕೆಲಸಕ್ಕೆ ಬಾರದೇ ಇರೋದು ಹಲವು ಅನುಮಾಗಳಿಗೆ ಕಾರಣವಾಗಿತ್ತು. ಒಡಿಶಾದಲ್ಲಿ ಹಂತಕ ಇರುವ ಶಂಕೆ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿದ್ದರು. ಕೊಲೆ ಪ್ರಕರಣದ ಬಗ್ಗೆ ಒಡಿಶಾ ಪೊಲೀಸರಿಗೂ ಸಹ ಮಾಹಿತಿ ನೀಡಿದ್ದರು ಎಂದು ವರದಿಯಾಗಿದೆ.

- Advertisement -

Related news

error: Content is protected !!