- Advertisement -
- Advertisement -
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ.
ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್ನಲ್ಲಿ ಭಿನ್ನವಿಸಿಕೊಂಡಿರುವ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ. ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- Advertisement -