- Advertisement -
- Advertisement -


ಉಡುಪಿ: ಕಳೆದ 29 ವರ್ಷಗಳಿಂದ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮೆರೆಸಿಕೊಂಡಿದ್ದ ಆರೋಪಿಯೊರ್ವನನ್ನು ಮಣಿಪಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕುಂದಾಪುರದ ಕೃಷ್ಣ ಭಂಡಾರಿ ಎಂದು ಗುರುತಿಸಲಾಗಿದೆ.
1995ರಲ್ಲಿ ವ್ಯಕ್ತಿಯೊಬ್ಬರಿಗೆ ಅಡ್ಡಗಟ್ಟಿ, ಕಬ್ಬಿಣದ ಸರಳುಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿತ್ತು. ಈ ಹಲ್ಲೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದ ಕೃಷ್ಣ ಭಂಡಾರಿ ತಲೆಮರಿಸಿಕೊಂಡಿದ್ದ. ಇದೀಗ ಆತನನ್ನು ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ಮಾರ್ಗದರ್ಶನದಲ್ಲಿ ಸಿಬ್ಬಂದಿ ಪ್ರಸನ್ನ ಸಿ. ಹಾಗೂ ಇಮ್ರಾನ್ ಮಾಹಿತಿಯನ್ನು ಕಲೆಹಾಕಿ ಕುಂದಾಪುರದಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
- Advertisement -