Monday, June 30, 2025
spot_imgspot_img
spot_imgspot_img

ಅನುಮಾನಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ..!

- Advertisement -
- Advertisement -

ನೀರಿನ‌ ತೊಟ್ಟಿ ಪಕ್ಕ ಅನುಮಾನಸ್ಪದವಾಗಿ ತಾಯಿ-ಮಗಳ ಶವ ಪತ್ತೆಯಾಗಿರುವ ಘಟನೆ ಚಿತ್ರದುರ್ಗದ ಕೆಳಗೋಟೆಯ ತಿಪ್ಪೇರುದ್ರಸ್ವಾಮಿ ಮಠದಲ್ಲಿ ನಡೆದಿದೆ.

ಮೃತಪಟ್ಟವರನ್ನು ಕೆಳಗೋಟೆ ನಿವಾಸಿ ಸುರೇಶ್ ಎಂಬುವವರ ಪತ್ನಿ ಗೀತಾ(42), ಮಗಳು ಪ್ರಿಯಾಂಕಾ(20) ಎಂದು ಗುರುತಿಸಲಾಗಿದೆ.

ನಗರದ ಕೆಳಗೋಟೆ ತಿಪ್ಪೇರುದ್ರಸ್ವಾಮಿ ಮಠದ ತೊಟ್ಟಿ ಪಕ್ಕ ಮೃತರ ಶವಗಳು ಪತ್ತೆಯಾಗಿವೆ. ನೀರಿನಲ್ಲಿ ಮುಳುಗಿ ತಾಯಿ-ಮಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ಕೂಡ ವ್ಯಕ್ತವಾಗಿವೆ. ಶವಗಳನ್ನು ಕಂಡು ತಂದೆ-ಮಗ ಗಾಬರಿಯಾಗಿದ್ದಾರೆ. ನೀರಿನಲ್ಲಿ ಮುಳುಗಿ ತಾಯಿ, ಮಗಳು ಪ್ರಾಣಬಿಟ್ಟರಾ ಅಥವಾ ಕೊಲೆ ಮಾಡಲಾಗಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಘಟನಾ ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

- Advertisement -

Related news

error: Content is protected !!