- Advertisement -
- Advertisement -
ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ಬೆಂಗಳೂರು ಶ್ರೀಮಂತರ ಬಡಾವಣೆ ಸದಾಶಿವನಗರದಲ್ಲಿ ನಡೆದಿದೆ.
ಸ್ಯಾಂಕಿ ಕೆರೆಯಲ್ಲಿ ತೇಲಾಡುತ್ತಿದ್ದ ಅಪರಿಚಿತ ವ್ಯಕ್ತಿಯ ಶವ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ತಲುಪಿಸಲಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಂಪೂರ್ಣ ಮಾಹಿತಿ ತಿಳಿದು ಬರಲಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -