- Advertisement -
- Advertisement -




ತಿಪಟೂರು: ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಿಪಟೂರಿನಲ್ಲಿ ನಡೆದಿದೆ. ಮೃತ ಬಾಲಕರನ್ನು ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಎಂದು ಗುರುತಿಸಲಾಗಿದೆ.
ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
- Advertisement -