Friday, June 27, 2025
spot_imgspot_img
spot_imgspot_img

ಬ್ರೇಕ್ ಫೇಲ್​ ಆಗಿ ಶಾಲೆಗೆ ನುಗ್ಗಿದ ಬಸ್; ಓರ್ವ ಪ್ರಯಾಣಿಕ ಸಾವು..!

- Advertisement -
- Advertisement -

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಬ್ರೇಕ್ ಫೇಲ್​ ಆಗಿ ಶಾಲೆಯೊಂದಕ್ಕೆ ನುಗ್ಗಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿದ ಘಟನೆ ಸಕಲೇಶಪುರ ತಾಲೂಕಿನ ಬಾಗೆ ಬಳಿ ನಡೆದಿದೆ.

ಕೆಎಸ್​ಆರ್​ಟಿಸಿ ಬಸ್​ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವಾಗ ಮಾರ್ಗಮಧ್ಯೆ ಬ್ರೇಕ್ ಫೇಲ್ ಆಗಿದೆ. ಹೀಗಾಗಿ ಬಾಗೆ ಬಳಿ ಇರುವ ಜೆಎಸ್ಎಸ್​ ಶಾಲೆಗೆ ಬಸ್​ ನುಗ್ಗಿಕೊಂಡು ಹಾಗೇ ಮುಂದೆ ಹೋಗಿದೆ. ಪರಿಣಾಮ ಬಸ್ಸಿನ ಮುಂಭಾಗದ ಕಿಟಕಿ ಬಳಿ ಕುಳಿತ್ತಿದ್ದ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಭಾನುವಾರವಾಗಿದ್ದರಿಂದ ಶಾಲೆಗೆ ರಜೆ ಇತ್ತು. ಹೀಗಾಗಿ ಮಕ್ಕಳು ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಇನ್ನು ಶಾಲೆಯ ಕಟ್ಟಡವು ಹಾನಿಯಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!