- Advertisement -
- Advertisement -



ಬಸ್ ವೊಂದು ನಿಯಂತ್ರಣ ತಪ್ಪಿ ಸೇತುವೆಯ ಮೇಲಿಂದ ರೈಲ್ವೆ ಹಳಿಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹರಿದ್ವಾರದಿಂದ ಉದಯಪುರಕ್ಕೆ ತೆರಳುತ್ತಿದ್ದ ಸಂದರ್ಭ ಮೇಲ್ಸೇತುವೆಯಿಂದ ದೌಸಾದ ರೈಲ್ವೆ ಹಳಿ ಮೇಲೆ ಬಸ್ ಬಿದ್ದು, ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 28 ಮಂದಿ ಗಾಯಗೊಂಡಿದ್ದಾರೆ. ಗಾಯಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ದೌಸಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್ಕುಮಾರ್ ಕಸ್ವಾ ತಿಳಿಸಿದ್ದಾರೆ.
ಘಟನೆಗೆ ಸಂಬಂಧಪಟ್ಟ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.
- Advertisement -