- Advertisement -
- Advertisement -



ಕಾರವಾರ: ಪ್ರವಾಸಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪ ಬಳಿ ಗೋಳಿಮಕ್ಕಿ ಎಂಬಲ್ಲಿ ನಡೆದಿದೆ.
ಮೃತರನ್ನು ಬಸ್ ಚಾಲಕ ತುಮಕೂರು ಮಧುಗಿರಿ ತಾಲೂಕ ಕೈಮಾರ ಗ್ರಾಮದ ನಿವಾಸಿ ಲೋಕೇಶ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಹಿರೆಬಿದನೂರು ಗ್ರಾಮದ ರುದ್ರೇಶ್ ಗಂಗಾಧರಾಯ್ ಎಂದು ಗುರುತಿಸಲಾಗಿದೆ.
ಇದು ತುಮಕೂರಿನ ಪ್ರವಾಸಿ ಬಸ್ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -