Tuesday, April 30, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 15 ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯ..!

- Advertisement -G L Acharya panikkar
- Advertisement -

ಸ್ಟೇರಿಂಗ್ ಜಾಮ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮದ ಬಳಿ‌ ನಡೆದಿದೆ.

ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಯಾಣಿಕರ ಕೂಗಾಟ, ಚಿರಾಟ ಕೇಳಿ ಗ್ರಾಮಸ್ಥರು ಓಡಿ ಬಂದಿದ್ದು ಬಸ್‌ ಅನ್ನು ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನುರಕ್ಷಿಸಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದ್ದು, ಗಾಯಾಳುಗಳನ್ನು ರಕ್ಷಿಸಿ ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!