- Advertisement -
- Advertisement -
ಮಂಜೇಶ್ವರ: ಉದ್ಯಾವರ ಮಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿರುವಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಉದ್ಯಾವರ ಮಾಡ ಕೊಳಕೆ ಗುತ್ತು ನಿವಾಸಿ, ರಘುನಾಥ ಆಳ್ವರ ಪುತ್ರ ಮಂಗಳೂರು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ (17) ಎನ್ನಲಾಗಿದೆ.
ಸಂಜೆ ಕಾಲೇಜು ಬಿಟ್ಟು ಮನೆಗೆ ಹಿಂತಿರುಗುವ ವೇಳೆ ಉದ್ಯಾವರ ಮಾಡದಲ್ಲಿ ಬಸ್ಸಿದ್ದ ಇಳಿದು ರಸ್ತೆ ದಾಟುತ್ತಿರುವಾಗ ಮಂಗಳೂರು ಭಾಗದಿಂದ ಕಾಸರಗೋಡು ಭಾಗಕ್ಕೆ ತರಳುತ್ತಿದ್ದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಕೂಡಲೇ ಸ್ಥಳೀಯರು ಗಾಯಗೊಂಡ ಸುಮಂತ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಮೃತಪಟ್ಟಿದ್ದಾನೆ.
- Advertisement -