- Advertisement -
- Advertisement -
ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೊಮ್ಮಲೂರು ಫ್ಲೈಓವರ್ ಬಳಿ ಸಂಭವಿಸಿದೆ.
ಬ್ರಿಡ್ಜ್ ಮೇಲಿಂದ ಕಾರು ಪಲ್ಟಿಯಾಗಿದ್ದು, ಕಾರು ಚಾಲಕ ಸಾಗರ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಾಲ್ವರು ಯುವಕರು ಕೋಲಾರದಿಂದ ಬೆಂಗಳೂರಿಗೆ ವೋಕ್ಸ್ ವ್ಯಾಗನ್ ಕಾರಿನಲ್ಲಿ ಬರುತ್ತಿದ್ದರು. ನಿದ್ದೆಗಣ್ಣಿನಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿ ಹೊಡೆದಿದೆ.
ಕಾರು ಚಾಲಕ ಸಾಗರ್ ಸ್ಥಳದಲ್ಲೇ ಸಾವನ್ನಪ್ಪಿದ್ದು ಉಳಿದವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿ.ವಿ ರಾಮನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲಸೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
- Advertisement -