Friday, May 17, 2024
spot_imgspot_img
spot_imgspot_img

ಅಯ್ಯಪ್ಪ ಭಕ್ತಾದಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ

- Advertisement -G L Acharya panikkar
- Advertisement -

ಶಬರಿಮಲೆ ಅಯ್ಯಪ್ಪ ಭಕ್ತಾದಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರವಾಗಿ ಅಪಘಾತಕ್ಕೀಡಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಅಪಘಾತದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಗಂಭೀರ ಗಾಯಗೊಂಡಿದ್ದಾರೆ.

ಮೃತ ದುರ್ದೈವಿ ಕುಶಾಲನಗರದ ಹಾರಂಗಿ ನಿವಾಸಿ ಚಂದ್ರ ಎಂದು ಗುರುತಿಸಲಾಗಿದೆ . ಅಪಘಾತಕ್ಕೀಡಾಗಿರುವ ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಆಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕುಶಾಲನಗರದ ಲಿಂಗಂ, ಹರೀಶ್, ಸಂತೋಷ್​ರನ್ನು ಪೆರಂಬೂರಿನ ರಾಜಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!