- Advertisement -
- Advertisement -
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಕೌಡಿಚ್ಯಾರ್ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಅಲ್ವಿನ್ ಡಿ ಸೋಜಾ ಮತ್ತು ಕಾರ್ತಿಕ್ ಶೆಟ್ಟಿ ಕಾರ್ಕಳ ಕಾರಿನಲ್ಲಿ ಸಿಲುಕಿಕೊಂಡವರು ಎಂದು ತಿಳಿದು ಬಂದಿದೆ.
ಮಡಿಕೇರಿಯಿಂದ ಕಾರ್ಕಳಕ್ಕೆ ತೆರಳುತ್ತಿದ್ದ ಕಾರು ಕೌಡಿಚ್ಯಾರ್ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪಲ್ಟಿಯಾದ ಕಾರಿನಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಸಾರ್ವಜನಿಕರು ರಕ್ಷಿಸಿದ್ದಾರೆ.ಪುತ್ತೂರು ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಬಂದು ಸಹಕರಿಸಿದರು.
- Advertisement -