- Advertisement -
- Advertisement -
ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿದ್ದ ಕಾರು ಕಾಣೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಕಿಶೋರ್ ಪುಜಾರಿ (37) ಎಂಬವರು ದಿನಾಂಕ 25-02-2024 ರಂದು ರಾತ್ರಿ, ತನ್ನ ಗೆಳೆಯನ KA 20 ME 1456 ನೇ ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಮಾರುತಿ 800 ಕಾರು ಕಾರನ್ನು (ಅಂದಾಜು ಮೌಲ್ಯ 40,000 ) ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿದ್ದು, ಮರಳಿ ದಿನಾಂಕ 01-03-2024 ರಂದು ಬೆಳಿಗ್ಗೆ ಬಂದು ನೋಡಿದಾಗ, ಕಾರು ನಿಲ್ಲಿಸಿದ್ದ ಸ್ಥಳದಲ್ಲಿ ಕಾಣದಿದ್ದು, ಕಾರು ಕಳುವಾಗಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 16/2024 ಕಲಂ:379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -