Sunday, May 5, 2024
spot_imgspot_img
spot_imgspot_img

ತಂದೆ ಚಾಕಲೇಟ್‌ಗೆ ಹಣ ಕೊಡಲಿಲ್ಲ ಎಂದು ಫ್ರೀ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು; 2 ದಿನದ ಬಳಿಕ ಪತ್ತೆ

- Advertisement -G L Acharya panikkar
- Advertisement -
vtv vitla

ತಂದೆ ಚಾಕಲೇಟ್​ಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ 10 ಮತ್ತು 9 ನೇ ತರಗತಿ ಓದುತ್ತಿದ್ದ ಇಬ್ಬರು ಪುತ್ರಿಯರು ಮನೆ ಬಿಟ್ಟು ಹೋದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.

ಇಬ್ಬರು‌ ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದು ಮಕ್ಕಳು ಕಾಣುತ್ತಿಲ್ಲ ಎಂದು ಪೋಷಕರು ಗಾಬರಿಯಾಗಿದ್ದಾರೆ. ತಂದೆ-ತಾಯಿ ಮೇಲಿನ ಕೋಪಕ್ಕೆ ಹೆಣ್ಣು ಮಕ್ಕಳು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಅಕ್ಕ-ತಂಗಿಯರಿಬ್ಬರು ತಂದೆಗೆ ಚಾಕಲೇಟ್​ಗೆ ಹಣ ಕೊಡುವಂತೆ ಕೇಳಿದ್ದಾರೆ. ತಂದೆ ಹಣ ಕೊಡದೆ ಮಕ್ಕಳ ಮೇಲೆ ರೇಗಾಡಿದ್ದಾರೆ. ಇದರಿಂದ ಕೋಪಗೊಂಡ ಇಬ್ಬರು ಪುತ್ರಿಯರು ಬಸ್ ಹತ್ತಿ ಫ್ರೀಯಾಗಿ ಧರ್ಮಸ್ಥಳಕ್ಕೆ ಪ್ರಯಾಣಿಸಿದ್ದಾರೆ. ಕೋಣನಕುಂಟೆಯಿಂದ ಧರ್ಮಸ್ಥಳಕ್ಕೆ ಹೋಗಿದ್ದಾರೆ.

ಈ ವಿಚಾರ ತಿಳಿಯದ ಪೋಷಕರು ಭಯಭೀತರಾಗಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸಹೋದರಿಯರ ಹುಡುಕಾಟ ನಡೆಸಿದ ಪೊಲೀಸರು, ಮಕ್ಕಳು ನಾಪತ್ತೆಯಾದ ಎರಡು‌ ದಿನದ ಬಳಿಕ ಅಂದ್ರೆ ಜೂನ್ 18 ರಂದು ಧರ್ಮಸ್ಥಳದಲ್ಲಿ ಸಹೋದರಿಯರಿಬ್ಬರನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಮಕ್ಕಳ ಪತ್ತೆಯಿಂದ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.

- Advertisement -

Related news

error: Content is protected !!