Monday, May 13, 2024
spot_imgspot_img
spot_imgspot_img

ಕಾಸರಗೋಡು: ಅಂಗಡಿಗೆ ತೆರಳಿದ್ದ ಕೂಲಿ ಕಾರ್ಮಿಕನ ಮೃತದೇಹ ಹೊಳೆಯಲ್ಲಿ ಪತ್ತೆ

- Advertisement -G L Acharya panikkar
- Advertisement -

ಕಾಸರಗೋಡು: ಸಾಮಾಗ್ರಿ ಖರೀದಿಸಲೆಂದು ಮನೆಯಿಂದ ಅಂಗಡಿಗೆ ತೆರಳಿದ್ದ ಕೂಲಿ ಕಾರ್ಮಿಕನ ಮೃತದೇಹ ಹೊಳೆಯಲ್ಲಿ ಪತ್ತೆಯಾದ ಘಟನೆ ವರ್ಕಾಡಿ ಸಮೀಪ ನಡೆದಿದೆ.

ವರ್ಕಾಡಿ ಆನೆ ಕಲ್ ನ ಬಾಲಕೃಷ್ಣ ನಾಯ್ಕ್ (39) ಮೃತ ಪಟ್ಟವರು. ಕೂಲಿ ಕೆಲಸ ಮುಗಿಸಿ ಮನೆಗೆ ಬಂದಿದ್ದ ಬಾಲಕೃಷ್ಣರವರು ಶುಕ್ರವಾರ ರಾತ್ರಿ ಅಂಗಡಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು.

ತಡ ರಾತ್ರಿ ಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಸಂಬಂಧಿಕರು ಶೋಧ ನಡೆಸಿದ್ದರು.ಈ ನಡುವೆ ಆನೆಕಲ್ಲುನ ಎಂಬಲ್ಲಿ ಹೊಳೆ ಯಲ್ಲಿ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪೊಲೀಸರು ಹಾಗೂ ನಾಗರಿಕರು ಮೃತ ದೇಹವನ್ನು ಮೇಲಕ್ಕೆತ್ತಿದರು . ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದರು.ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು. ಮಂಜೇಶ್ವರ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

- Advertisement -

Related news

error: Content is protected !!