Saturday, June 28, 2025
spot_imgspot_img
spot_imgspot_img

ಕುಂದಾಪುರ: ಬೆಂಗಳೂರಿನಿಂದ ಹೊರಟು ಬಂದ ವ್ಯಕ್ತಿಯ ಮೃತದೇಹ ಹೊಳೆಯಲ್ಲಿ ಪತ್ತೆ

- Advertisement -
- Advertisement -

ಕುಂದಾಪುರ: ಬೆಂಗಳೂರಿನಿಂದ ಊರಿಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟು ಬಂದಿದ್ದ ಬಡಾಕೇರಿ ಗ್ರಾಮದ ವ್ಯಕ್ತಿಯೊಬ್ಬರ ಮೃತದೇಹ ಆನಗಳ್ಳಿ ಸಮೀಪದ ಹೊಳೆಯಲ್ಲಿ ಪತ್ತೆಯಾಗಿದೆ.

ಮೃತ ಯುವಕ ಸಾತುಬೆಟ್ಟು ನಿವಾಸಿ ರಾಜು ಬಿ. (48) ಎಂದು ಗುರುತಿಸಲಾಗಿದೆ.

ರಾಜು ಅವರು ಬೆಂಗಳೂರಿನಲ್ಲಿ ಕ್ಯಾಟರಿಂಗ್ ಉದ್ಯೋಗ ಮಾಡಿಕೊಂಡಿದ್ದು, ಜೂ. 20ರಂದು ಊರಿಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟಿದ್ದರು. ಬಳಿಕ ಆನಗಳ್ಳಿ ಹೊಳೆಯಲ್ಲಿ ಗಂಡಸಿನ ಮೃತದೇಹ ಸಿಕ್ಕಿರುವ ವಿಚಾರ ತಿಳಿದು ಸಹೋದರ ಅಶೋಕ ಅವರು ಸ್ಥಳಕ್ಕೆ ಹೋಗಿ ನೋಡಿದಾಗ ಅದು ರಾಜು ಅವರದೇ ಮೃತದೇಹವೆಂದು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ರಾಜು ಅವರು ಯಾವುದೋ ಕಾರಣಕ್ಕೆ ಆನಗಳ್ಳಿಯ ನದಿಯ ಸಮೀಪಕ್ಕೆ ಹೋದವರು ಆಕಸ್ಮಿಕವಾಗಿ ಹೊಳೆ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!