Friday, May 3, 2024
spot_imgspot_img
spot_imgspot_img

ರೈಲು ಹಳಿಯಲ್ಲಿ ಅನುಮಾನಾಸ್ಪದವಾಗಿ ಯುವಕನ ಮೃತದೇಹ ಪತ್ತೆ..!

- Advertisement -G L Acharya panikkar
- Advertisement -

ಸಂಶಯಾಸ್ಪದವಾಗಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನ ಯಶವಂತಪುರ ರೈಲು ಹಳಿಯಲ್ಲಿ ನಡೆದಿದೆ.

ಮೃತದೇಹ ಕೊಳ್ಳೇಗಾಲದ ಲಿಂಗಾಣಾಪುರದ ನಂದೀಶ್(27) ಎಂದು ಗುರುತಿಸಲಾಗಿದೆ.

ಮೃತದೇಹವು ಮೂರು ತುಂಡುಗಳಾಗಿ ಪತ್ತೆಯಾಗಿರುವ ಹಿನ್ನೆಲೆ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಮೊನ್ನೆ ರಾತ್ರಿ ಮೈಸೂರಿನಿಂದ ಬಂದಾಗ ಕೊಳ್ಳೇಗಾಲ ಬಸ್ ನಿಲ್ದಾಣದ ಬಳಿ ಮೂವರು ನಂದೀಶ್ ಮೇಲೆ ಹಲ್ಲೆ ನಡೆಸಿದ್ದರೆಂಬ ಆರೋಪಿಸಿದ್ದ ಪೋಷಕರು. ಬಸ್ ನಲ್ಲಿ ತನ್ನ ಪತ್ನಿ ಮೈಮುಟ್ಟಿದ ಎಂದು ನಂದೀಶ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದ ವ್ಯಕ್ತಿಗಳು. ನಂದೀಶ್‌ನನ್ನು ಅಟ್ಟಾಡಿಸಿಕೊಂಡು ಹೋಗಿದ್ದ ಮೂವರು ವ್ಯಕ್ತಿಗಳು. ಆ ಬಳಿಕ ನಂದೀಶ್ ಮನೆಗೆ ವಾಪಾಸ್ಸಾಗಿರಲಿಲ್ಲ. ಹೀಗಾಗಿ ಪೊಲೀಸರಿಗೆ ದೂರು ನೀಡಲು ಹೋಗಿದ್ದ ಪೋಷಕರು. ಆದರೆ ದೂರು ದಾಖಲಿಸಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ಮಾಡಿದ್ದರು. ಇದಾಗಿ ಮಾರನೇ ದಿನವೇ ಯಶವಂತಪುರದ ರೈಲು ಹಳಿಯಲ್ಲಿ ಮೂರು ತುಂಡುಗಳಾಗಿ ಮೃತದೇಹ ಪತ್ತೆಯಾದೆ. ತಮ್ಮ ಮಗನನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

- Advertisement -

Related news

error: Content is protected !!