Sunday, May 5, 2024
spot_imgspot_img
spot_imgspot_img

ಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಮಹಿಂದ್ರಾ ಥಾರ್ ಓಡಿಸಿದ ಚಾಲಕ

- Advertisement -G L Acharya panikkar
- Advertisement -

ಟ್ರಾಫಿಕ್ ಜಾಮ್ ನಿಂದ ಬೇಸತ್ತು ಮಹಿಂದ್ರಾ ಥಾರ್ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ಪೊಲೀಸರು ದಂಡ ವಿಧಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ. ಇದರಿಂದ ಪಾರಾಗಲು ಚಾಲಕ ತನ್ನ ಮಹಿಂದ್ರಾ ಥಾರ್ ಅನ್ನು ಹಿಮಾಚಲ ಪ್ರದೇಶದಲ್ಲಿನ ಚಂದ್ರ ನದಿಯಲ್ಲಿ ಓಡಿಸಿದ್ದಾನೆ.

ಈ ರೀತಿ ನದಿಯಲ್ಲಿ ಕಾರು ಚಾಲನೆ ಮಾಡುವುದು ಅಪಾಯಕಾರಿಯಾಗಿದ್ದು, ನದಿಯಲ್ಲಿನ ಜಲಚರಗಳಿಗೆ ಹಾನಿಯಾಗುತ್ತದೆ. ಆದ್ದರಿಂದ ಪೊಲೀಸರು ಚಾಲಕನ ವಿರುದ್ದ ಕ್ರಮಕೈಗೊಂಡು ದಂಡ ವಿಧಿಸಿದ್ದಾರೆ. ಹಾಗೂ ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ನಿಯೋಜನೆ ಮಾಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಮಾತ್ರವಲ್ಲದೆ ಕೆಲವರು ಈ ವಿಡಿಯೋವನ್ನು ಉದ್ಯಮಿ ಆನಂದ್ ಮಹೀಂದ್ರಾ ಅವರಿಗೂ ಟ್ಯಾಗ್ ಮಾಡುತ್ತಿದ್ದಾರೆ.

- Advertisement -

Related news

error: Content is protected !!