Sunday, May 19, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಮೂವರು ಸಾವು, ಮೂವರು ಗಂಭೀರ..!

- Advertisement -G L Acharya panikkar
- Advertisement -

ಕ್ಯಾಂಟರ್​ ಲಾರಿಯೊಂದು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿ ಪರಿಣಾಮ ಮೂವರು ಸಾವನ್ನಪ್ಪಿದ್ದು ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರಹೊಲಯದಲ್ಲಿ ನಡೆದಿದೆ.

ಮೃತಪಟ್ಟವರನ್ನು ಧಾರವಾಡದ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ (22), ನವೀನ್ ಕುಂಬಾರ್ (23) ಎಂದು ಗುರುತಿಸಲಾಗಿದೆ.

ಇವರೆಲ್ಲ ಟ್ಯಾಂಕರ್​ನಲ್ಲಿ ಕುಂದಗೋಳದಿಂದ ಕೊಪ್ಪಳದ ಕನಕಗಿರಿಗೆ ಹೋಗುತ್ತಿದ್ದರು. ಈ ವೇಳೆ ವಾಹನ ಹಳ್ಳಿಗುಡಿ ಗ್ರಾಮದ ಹೊರ ಹೊಲಯದಲ್ಲಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಮೂವರು ಮೃತಪಟ್ಟರೇ, ಇನ್ನು ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೂವರು ಗಾಯಾಳುಗಳಿಗೆ ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!