- Advertisement -
- Advertisement -





ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ನೇರವಾಗಿ ರಸ್ತೆ ಬದಿಯಲ್ಲಿದ್ದ ಹೋಟೆಲ್ ಒಳಗೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಶಿವಮೊಗ್ಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ.
ಅತ್ತ ಹುಬ್ಬಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರೊಂದು, ಸ್ಥಳದಲ್ಲಿ ನಿಯಂತ್ರಣ ಕಳೆದುಕೊಂಡಿದೆ. ಚಾಲಕ ಕಂಟ್ರೋಲ್ ತೆಗೆದುಕೊಳ್ಳುವ ಹೊತ್ತಿಗೆ ಅಡ್ಡಾದಿಡ್ಡಿ ಓಡಿದ ಕಾರು ಅಲ್ಲಿದ್ದ ಹೋಟೆಲ್ವೊಂದಕ್ಕೆ ನುಗ್ಗಿದೆ.ಇನ್ನು ಹೋಟೆಲ್ನಲ್ಲಿ ತಿಂಡಿ ತಿನ್ನುತ್ತಿದ್ದ ಅಜ್ಜ ಹಾಗೂ ಅವರ ಮೊಮ್ಮಗನಿಗೆ ಕಾರು ಡಿಕ್ಕಿಯಾಗಿದ್ದು, ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿರಾಳಕೊಪ್ಪ ಪಟ್ಟಣದ ಸೊರಬ ರಸ್ತೆ ಹಾಗೂ ಆನವಟ್ಟಿ ರಸ್ತೆ ಸೇರುವ ವೃತ್ತದಲ್ಲಿ ಈ ದುರ್ಘಟನೆ ಸಂಭವಿಸಿದೆ.
- Advertisement -