Saturday, May 11, 2024
spot_imgspot_img
spot_imgspot_img

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg
This image has an empty alt attribute; its file name is shri-energy-solar-667x1024.jpeg

ಕುಂದಾಪುರ: ಗುಡ್ಡೆಅಂಗಡಿ ರಾ.ಹೆ. ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ. 27ರಂದು ಮಧ್ಯಾಹ್ನ 2.30ರ ಸುಮಾರಿಗೆ ಸಂಭವಿಸಿದೆ.

ಅಪಘಾತದಲ್ಲಿ ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಂದಾಗಿ ಮುರುಡೇಶ್ವರ, ಗೋಕರ್ಣದ ಕಡೆಗೆ ವೀಕೆಂಡ್‌ ರಜೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದವರಾಗಿದ್ದಾರೆ.ಅಪಘಾತದ ತೀವ್ರತೆಗೆ ಕಾರಿನ ಒಂದು ಬದಿ ಸಂಪೂರ್ಣ ಜಖಂಗೊಂಡಿತ್ತು. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!