- Advertisement -
- Advertisement -




ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮವಾಗಿ ಹಾದು ಹೋಗುವ ಹೈವೇ ಬ್ರಿಡ್ಜ್ ಸಮೀಪ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಶ್ರೇಯ, ಶ್ರೀನಿವಾಸ್ ಹಾಗೂ ಚಾಲಕ ಸುರೇಶ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಗಿದೆ. ಸ್ಥಳಕ್ಕೆ ತಳಕು ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -