Friday, May 3, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಮೃತ್ಯು..!

- Advertisement -G L Acharya panikkar
- Advertisement -

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಕಂಬದ ಕೋಣೆ ಜಂಕ್ಷನ್ ಸಮೀಪ ನಡೆದಿದೆ.

ಮೃತಪಟ್ಟವರನ್ನು ಪ್ರದ್ಯೋತ್ ಎಂದು ಗುರುತಿಸಲಾಗಿದೆ.

ಕಾರವಾರದಿಂದ ಕುಂದಾಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಂಬದಕೋಣೆ ಜಂಕ್ಷನ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಏರಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ವೇಳೆ ನುಜ್ಜುಗುಜ್ಜಾದ ಕಾರಿನೊಳಗೆ ಸಿಲುಕಿದ್ದ ಕಾರಿನ ಚಾಲಕನನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆದು ಬೈಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು.

ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷಿಸಿದ ವೈದ್ಯರು ಮ್ರತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಬೈಂದೂರು ಪಿ.ಎಸ್.ಐ ತಿಮ್ಮೇಶ್ ಬಿ.ಎನ್.ಮತ್ತು ಸಿಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!