Monday, April 29, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರು ಮೃತ್ಯು..!

- Advertisement -G L Acharya panikkar
- Advertisement -

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ‌ ಬಳ್ಳೇಕಟ್ಟೆ ಬಳಿ ನಡೆದಿದೆ.

ಮೃತಪಟ್ಟವರನ್ನು ಮುತ್ತು (75), ವಿಲಂಪಡಿ (40) ಎಂದು ಗುರುತಿಸಲಾಗಿದೆ.

ಮೃತರಿಬ್ಬರು ತಂದೆ ಮಗನಾಗಿದ್ದರು. ಇವರಿಬ್ಬರು ತಮಿಳು ನಾಡಿನ ತಿರುಮಲೈನಿಂದ ಪುಣೆಗೆ ತೆರಳುವಾಗ ಈ ಘಟನೆ ನಡೆದಿದೆ. ಅಪಘಾತದಿಂದಾಗಿ ಕಾರಿನಲ್ಲಿದ್ದ ರಾಜುಗೆ ಗಂಭೀರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಭರಮಸಾಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!